Friday, May 11, 2012

ವಿಮುಖ


ಹಳ್ಳಿಗಳಲ್ಲಿ ಅದೆಷ್ಟೋ ಪ್ರತಿಭೆಗಳಿಗೆ ಮಾನ್ಯತೆ ಸಿಗದಿದ್ದಾಗ, ಅವುಗಳು ಪಟ್ಟಣಕ್ಕೆ ಬಂದು ಏನನ್ನಾದರೂ ಸಾಧಿಸಬೇಕೆಂದು ಹವಣಿಸುತ್ತವೆ. ಆದರೆ, ನಗರ ಪ್ರದೇಶದ ಬದುಕಿಗೆ ಅಂಟಿಕೊಂಡ ಕ್ಷಣಕ್ಕೆ ತಮ್ಮ ಹಿಂದಿನದೂ ಮರೆಯುವದು ಸಹಜ ರೂಡಿಯಾಗಿದೆ. ಆ ಹಿನ್ನಲೆಯಲ್ಲಿ ಒರ್ವ ಯುವಕ ಹಳ್ಳಿಯಿಂದ ನಗರಕ್ಕೆ ಬಂದು ಹೇಗೆ ಬದಲಾದ ಎಂಬುದನ್ನು ಅಚ್ಚುಕಟ್ಟಾಗಿ ವಿವರಿಸಿದ್ದಾರೆ ಶರತ್ ಚಕ್ರವತರ್ಿ, ಕುಂದಾಪುರ.

ಚಳಿಗಾಲ. ಬೆಳಗಿನ ಇಬ್ಬನಿ ಹೂ ಎಲೆಗಳನ್ನು ಅಪ್ಪಿ ಮುದ್ದಿಸುತ್ತಿದೆ. ಇತ್ತ ಜೇಡವೊಂದು ತನ್ನ ಬಲೆಯನ್ನು ಸರಿಪಡಿಸುತ್ತಾ, ಗಾಳಿಗೆ ಅಲುಗಾಡುತ್ತಾ ಉಯ್ಯಾಲೆಯಾಡುತ್ತಿದೆ. ಆ ಜೇಡರಬಲೆಯನ್ನು ಸಹ ಇಬ್ಬನಿ ಮುತ್ತಿ ಮುತ್ತಿನ ಮಣಿಗಳಂತೆ ಹೊಳೆಯುತ್ತಿವೆ. ಈ ರಮ್ಯ ಸಮಯವನ್ನು ಬಿಳಿಹಾಳೆಯ ಮೇಲೆ ಇಳಿಸುತ್ತಾ ತನ್ನ ಕಲಾಚತುರತೆಯನ್ನು ತಾನೇ ಸವಿಯುತ್ತಾ ಆ ಬಣ್ಣಗಳಲ್ಲೇ ಮುಳುಗಿದ್ದಾನೆ ವಿಕಾಸ್.
ವಿಕಾಸ ಯಾರೋ ಬಂದವ್ರೆ, ನೋಡಪ್ಪ ಅಮ್ಮನ ಧ್ವನಿ ಕೇಳುತ್ತಲೇ ಮಾಡುತ್ತಿದ್ದ ಕಸುಬನ್ನು ಅರ್ಧಕ್ಕೆ ನಿಲ್ಲಿಸಿ ಹಿತ್ತಲಿಂದ ನಡೆದನು.
ಬಂದಿದ್ದವನು ವಿಶ್ವನಾಥ. ವಿಕಾಸನ ಗೆಳೆಯ, ಜೊತೆಗೆ ಓದಿದವ. ಎಂ.ಕಾಂ ಮುಗಿಸಿ ಬೆಂಗ್ಳೂರಿನ ಕಾಲೆಜೊಂದರಲ್ಲಿ ಅಥಿತಿ ಉಪನ್ಯಾಸಕನಾಗಿದ್ದ. ಗೆಳೆಯರ ಭೇಟಿ ಕಾಫಿ ತಿಂಡಿ ಒಂದಿಷ್ಟು ಹರಟೆಗಳೊಂದಿಗೆ ನಡೆದು ವಿಕಾಸನ ಚಿತ್ರಗಳ ಕಡೆಗೆ ಬಂದಿತ್ತು. ನಿನ್ನೆಲ್ಲಾ ಪೇಂಟಿಂಗ್ಸ್ನ್ನು ಬೈಂಡಿಂಗ್ ಮಾಡ್ಸಿ ಇಟ್ಟಿರು, ನೆಕ್ಟ್ಸ್ ಟೈಮ್ ಬೆಂಗ್ಳೂರ್ ಚಿತ್ರಕಲಾ ಪರಷತ್ ಅಲ್ಲಿ ಎಕ್ಸಿಬಿಷನ್ಗೆ ತಗೊಂಡೋಗನ. ಟೋಟಲ್ ಎಷ್ಟ್ ಪೇಂಟಿಂಗ್ಸ್ ಆಗಿದವೆ. ಎಂದು ಗೋಡೆಗಳ ಮೇಲಿದ್ದ ಒಂದು ಚಿತ್ರಪಟವನ್ನ ನೋಡುತ್ತಾ ಹೇಳಿದ ವಿಶ್ವ.
ಎಕ್ಸಿಬಿಷನ್ಗೆ ತಗೊಂಡೋಗೊ ಅಂತದ್ದು ಯಾವ್ದು ಮಾಡಿಲ್ಲ. ಒಂದೆರಡು ಬಿಟ್ರೆ ಬಾಕಿ ಎಲ್ಲ ಪೆನ್ಸಿಲ್ ಸ್ಕೆಚ್ಗಳು ಅಷ್ಟೇ.
ಇನ್ನೂ ಟೈಮ್ ಐತಲಾ ನೀನ್ ಮಾಡು ಅಟ್ ಲೀಸ್ಟ್ ಒಂದೈವತ್ತಾದ್ರು ಮಾಡಿಟ್ಟಿರು
ಸರಿ ನೋಡ್ತಿನಿ ಕುಶಲೋಪರಿಗಳು ಮುಗಿದಿದ್ದವು. ವಿಶ್ವ ಹೊರಟು ಹೋದ. ವಿಶ್ವನ ಮಾತುಗಳು ವಿಕಾಸನಲ್ಲಿ ಚೈತನ್ಯ ಮೂಡಿಸಿದರೂ ಒಂದು ರೀತಿಯಲ್ಲಿ ಚಿಂತೆಗೀಡು ಮಾಡಿದವು. ವಿಕಾಸ ಒಬ್ಬ ಕಡುಬಡವ. ತಂದೆ ಇದ್ದದ್ದೆಲ್ಲವ ಕಳೆದು ಸೋತು ಮೂಲೆ ಹಿಡಿದಿದ್ದನು. ತಮ್ಮನೊಬ್ಬ ಇನ್ನು ಓದುತ್ತಿದ್ದ. ಎರಡು ಎಮ್ಮೆಗಳನ್ನು ಕಟ್ಟಿಕೊಂಡು ಅವನ ತಾಯಿ ಹೇಗೋ ಸಂಸಾರ ತೂಗಿಸಿದ್ದಳು. ಇವನ ಬಿ.ಎ ಉಪಯೋಗಕ್ಕೆ ಬಾರದ್ದಾಗಿತ್ತು. ಊಟಕ್ಕೆ ಪಾಡು ಪಡುವಾಗ ಇನ್ನೆಲ್ಲಿಯ ಎಕ್ಸಿಬಿಷನ್. ಚಿತ್ರಬಿಡಿಸಲು ಬೇಕಾಗುವ ವಿವಿಧ ನಮೂನೆ ಪೆನ್ಸಿಲ್, ಐವರಿ ಶೀಟ್ಗಳು, ಪೋಸ್ಟರ್ ಬಣ್ಣ ಬ್ರಷ್ಗಳನ್ನು ಕೊಳ್ಳಲು ಏನಿಲ್ಲವೆಂದರೂ ಸಾವಿರಾರು ರೂಪಾಯಿ ಬೇಕಿತ್ತು. ಅದರಲ್ಲಿ ಐವತ್ತು ಪೇಂಟಿಂಗ್ಸ್ ಎಂದರೇ ಅವನಿಗೆ ಹಲವಾರು ಸಾವಿರಗಳನ್ನೇ ಖಚರ್ು ಮಾಡಬೇಕಾಗಿತ್ತು. ತರುವುದು ಎಲ್ಲಿಂದ? ಆದಾಯ ಶೂನ್ಯ. ಕೆಲವು ಸ್ನೇಹಿತರು ಬಣ್ಣ ಕೆಲವು ಬ್ರಷ್ಗಳನ್ನು ಗಿಫ್ಟ್ ಎಂದು ನೀಡಿ, ಅವನ ಕೆಲವು ಪೇಂಟಿಂಗ್ಸನ್ನು ಅದೇ ಗಿಫ್ಟ್ ಹೆಸರಿನಲ್ಲಿ ತೆಗೆದುಕೊಂಡು ಹೋಗಿದ್ದರು. ಅವನ ಬಡತನ ಅವನನ್ನು ಹತಾಶನನ್ನಾಗಿಸಿತ್ತು.
ಆದರೂ ಅವನೊಬ್ಬ ಅದ್ಬುತ ಚಿತ್ರಕಲೆಗಾರ. ಎದುರಿದ್ದ ದೃಶ್ಯಕ್ಕೆ ಜೀವತುಂಬಿ, ಭಾವವುಳ್ಳ ಹನಿಗವನಗಳೊಂದಿಗೆ ಅದ್ಬುತ ದೃಷ್ಯಕಾವ್ಯವನ್ನೇ ಹುಟ್ಟುಹಾಕುವಂತ ನಿಪುಣನಾಗಿದ್ದ. ಮುಂದೊಂದು ದಿನ ದೊಡ್ಡ ಕಲಾವಿದನಾಗಿ ನಾಡಿಗೆ ಹೆಸರಾಗಬೇಕೆಂಬುದು ಅವನ ಆಶಯ; ಗುರಿ ಕೂಡ.
ಯಾವುದಾದರೂ ಸಣ್ಣ ಕೆಲಸಕ್ಕೆ ಸೇರಿ, ಜೊತೆ ಜೊತೆಗೆ ಚಿತ್ರಕಲೆಯ ಸಾಧನೆಗೆ ಶ್ರಮಿಸಬೇಕೆಂದು ತೀಮರ್ಾನಿಸಿದ್ದ. ಹಲವಾರು ಸಕರ್ಾರಿ ಖಾಸಗಿ ಕೆಲಸಗಳಿಗೆ ಅಜರ್ಿ ಎಸೆದು ಸಾಕಾಗಿ ಕುಳಿತಿರುವಾಗ ಅವನಿಗೆ ಸಿಕ್ಕಿದ್ದೆ ಲೋಕೋಪಯೋಗಿ ಇಲಾಖೆಯಲ್ಲಿ ಜವಾನನ ಕೆಲಸ.
ಸಕರ್ಾರಿ ಸಂಬಳ ಹೆಚ್ಚಲ್ಲದಿದ್ದರೂ ಕಡಿಮೆಯೆನ್ನುವಂತೆಯೂ ಇರಲಿಲ್ಲ. ಇದನ್ನೇನು ಕೊನೆಯವರೆಗೂ ಮಾಡಬೇಕೆ ಎಂದುಕೊಂಡು ಹೊರಡಲು ತಯಾರಾದ. ಅವನ ಗ್ರಹಾಚಾರಕ್ಕೊ ಏನೋ ಕೆಲ್ಸ ಸಿಕ್ಕಿದ್ದು ದೂರದ ಮಂಗಳೂರಿನಲ್ಲಿ. ಹಲವು ಆಪ್ತರ ಭರವಸೆಗಳೊಂದಿಗೆ ಹಾಸನದಿಂದ ಮಂಗಳೂರು ಬಸ್ಸು ಹತ್ತಿದ. ಅವನ ಒಂದು ತಿಂಗಳ ಖಚರ್ಿಗಾಗಿ ಮನೆಯಲ್ಲಿದ್ದ ಒಂದು ಎಮ್ಮೆಯನ್ನು ಮಾರಿ ಅವನ ತಾಯಿ ಕಣ್ಣಿರಿನ ನಡುವೆ ನಗುತ್ತಾ ಕಳುಹಿಸಿಕೊಟ್ಟರು.
ಮಂಗಳೂರು ಮಹಾನಗರದ ದುಭಾರಿ ಜೀವನ, ಅಸಾಧಾರಣ ಶೆಖೆ ಅವನನ್ನು ತತ್ತರಿಸುವಂತೆ ಮಾಡಿದವು. ಸ್ನೇಹಿತನ ದೂರದ ಸಂಬಂಧಿಯೊಬ್ಬನ ರೂಮಿನಲ್ಲೇ ಇವನಿಗೆ ಜಾಗ ದೊರೆಯಿತು. ಅವನು ಕೂಡ ಒಬ್ಬನಿದ್ದರಿಂದ ಹೊಂದಿಕೆಯಾಗುವಂತೆ ಕಂಡನು. ಮೊದಮೊದಲು ಕೆಲಸ ಆರಾಮು ಎನಿಸಿದರೂ ನಂತರದ ದಿನಗಳಲ್ಲಿ ಅಧಿಕಾರಿಗಳೇ ಕಿರಿಕಿರಿ ಎನಿಸತೊಡಗಿದರು. ಓಯ್ ವಿಕಾಸು ಇಲ್ಲಿ ಬಾ, ಎಂತದು ನೀನು ಕೆಲಸ ಮಾಡುವುದು. ಇಲ್ಲಿ ಕಾಣು ಬಲೆ ಹೇಗೆ ಬೀಳ್ತವುಂಟು ಎಂದು ಗುಮಾಸ್ತನ ಆರ್ಭಟ, ಬೊಜ್ಜ, ಸಾವು ಬೈಗಳಗಳ ಮಧ್ಯೆ ಜೀವನ ರೋಸಿಹೋಗುತ್ತಿತ್ತು. ಸೌಂದರ್ಯವೆಂದು ಭಾವುಕನಾಗಿ ಮೈಮರೆತು ನೋಡುತ್ತಿದ್ದ ಜೇಡರಬಲೆಗಳ ಮೇಲೆ ಕಿಡಿಕಿಡಿಯಾಗುವಂತಾಯಿತು.
ತಿಂಗಳು ತುಂಬುತ್ತಾ ಬಂದಿತ್ತು. ಎಮ್ಮೆ ಮಾರಿದ ಹಣವು ಮುಗಿದು ಜೇಬಿನಲ್ಲಿ ಹತ್ತು ರೂಪಾಯಿ ಮಾತ್ರ ಉಳಿದಿತ್ತು. ಸ್ನೇಹಿತನ ರೂಮಿನಲ್ಲೇ ರಾತ್ರಿ ಊಟ ಆಗುತ್ತಿದ್ದರಿಂದ ಹೇಗೋ ಜೀವ ಉಳಿದಿತ್ತೆನ್ನಬಹುದು. ಇನ್ನುಳಿದಂತೆ ಬೆಳಿಗ್ಗೆ ಮಧ್ಯಾಹ್ನಗಳು ಉಪವಾಸ ವ್ರತಗಳಾದವು. ಹಸಿದು ಹಸಿದು ಸಿಕ್ಕದೆಲ್ಲಾ ತಿನ್ನುವಂತಾಯಿತು ಅವನ ಪಾಡು. ಕೆಲವು ದಿನಗಳಲ್ಲಿ ರೂಮಿನ ಸ್ನೇಹಿತ ಕೂಡ ಬರಿಗೈಯ್ಯವನನ್ನು ಕಡೆಗಾಣಿಸಲಾರಂಭಿಸಿದ.
ಬ್ಯಾಂಕ್ ಅಕೌಂಟ್, ಎನ್.ಪಿ.ಸಿ ಇತ್ಯಾದಿ ರಗಳೆಗಳಿಂದ ಮೊದಲ ತಿಂಗಳ ಸಂಬಳವೂ ತಡವೇ. ಎರಡು ಮೂರು ತಿಂಗಳ ನಂತರ ಬಂದರೂ ಬಂದೀತು, ಎಂದಾಗ ವಿಕಾಸ ದಿಕ್ಕೆಟ್ಟು ಕುಳಿತನು. ಸಾಲ ಮಾಡಿಕೊಂಡಾದ್ರು ಹಾಸನ ಬಸ್ಸು ಹತ್ತಬೇಕೆನಿಸುತ್ತಿತ್ತು. ಹೀಗಿರುವಾಗ ಒಮ್ಮೆ ಕಾಂಟ್ರಕ್ಟ್ ಇಂಜಿನಿಯರ್ ಸೋಮನಾಥ ಶೆಟ್ಟಿಯವರು ಕಂಟ್ರಾಕ್ಟ್ ಬಿಲ್ ಸಂಬಂಧಿ  ಫೈಲ್ ನೀಡಿ ತುತರ್ಾಗಿ ಸಕರ್ಾರಿ ಅಭಿಯಂತರ ಸೈನ್ ಮಾಡಿಸಿ ತರಲು ಕೋರಿದರು. ಕೆಲಸ ಮುಗಿದ ಕೂಡಲೇ ನೂರು ರೂಪಾಯಿಯ ಬಣ್ಣದ ನೋಟನ್ನು ಚಾಚಿದರು. ಅಯ್ಯೊ ಬ್ಯಾಡ ಸರ್ ಬ್ಯಾಡ ಎಂದರೂ ಹೇ ಅಡ್ಡಿಯಿಲ್ಲ ಇಟ್ಟಗೋ ಮಾರಾಯ, ಬಿರಿಯಾನಿ ತಿನ್ನು" ಎಂದು ಅವನ ಜೇಬಿಗೆ ತುರುಕಿ ಗಲ್ಲ ತಟ್ಟಿದರು. ಹಸಿದು ತತ್ತರಿಸಿದ್ದವನು ಬಿರಿಯಾನಿ ಹೆಸರು ಕೇಳಿ ಮಾತುಬರದೇ ಸ್ಥಬ್ದನಾದ. ಅವನ ಹಸಿವು ಅವನ ಬಾಯಿ ಕಟ್ಟಿಹಾಕಿತು.
ಮಧ್ಯಾಹ್ನದ ಬಿಡುವಲ್ಲೇ ಹೋಗಿ ಹೊಟ್ಟೆ ತುಂಬ ಬಿರಿಯಾನಿ ತಿಂದು ಬೀಡ ಹಾಕುವ ನಿಧರ್ಾರ ಮಾಡಿದನು. ಬಿಡುವಾಯ್ತು. ಹೊರಟ, ಹೊಟೇಲ್ ಹತ್ತಿರವಾಗುತ್ತಿರವಂತೆ ಅವನ ಮನಸ್ಸು ಬಿರಿಯಾನಿಯ ರುಚಿಯಿಂದ ನಾಳೆ? ಎಂಬ ಪ್ರಶ್ನೆಯ ಕಡೆಗೆ ಸಾಗುತ್ತಿತ್ತು. ಸೀದಾ ಹೋದವನೆ ಸಣ್ಣ ಕ್ಯಾಂಟೀನಲ್ಲಿ ಒಂದೇ ಒಂದು ಖಾಲಿ ದೋಸೆ ತಿಂದು ಮಿಕ್ಕ ಹಣವನ್ನ ತನ್ನ ನಾಳೆಯ ಖರ್ಚನ್ನು ನೆನೆದು ಜೇಬಿಗಿಳಿಸಿದ. ಹೊಟ್ಟೆ ಸ್ವಲ್ಪ ಮಟ್ಟಿಗೆ ತುಂಬಿತಾದರೂ ಮನಸ್ಸು ಮಾತ್ರ ಪೂತರ್ಿ ತುಂಬಿ ಸಂತುಷ್ಟಗೊಂಡು ಸೋಮನಾಥಶೆಟ್ಟಿಗೆ ವಂದಿಸುತ್ತಿತ್ತು. ಆ ದಿನ ಕಳೆದು ಮರುದಿನ ಬಂತು. ಇಂದು ಕೂಡ ನೆನ್ನೆಯಂತೆ ಆದರೇ.....! ಎಂದುಕೊಳ್ಳುತ್ತಾ ಕೆಲಸದಲ್ಲಿ ತೊಡಗಿದನು. ಆದರೆ ಹಿಂದಿನ ದಿನ ಮತ್ತೇ ಮರುಕಳುಹಿಸಿತು. ಕಾರ್ಯಪಾಲಕ ಅಭಿಯಂತರರ ಕೊಠಡಿಯಿಂದ ಹೊರಬಂದ ವ್ಯಕ್ತಿಯೊಬ್ಬ ಇವನನ್ನು ಕರೆದು ಕೈಗೊಂದು ಕವರ್ ಕೊಟ್ಟು, ಇದನ್ನು ನಿಮ್ ಸಾಹೇಬರಿಗೆ ತಲುಪಿಸು, ಇದು ನಿನಗೆ ಎಂದು ವಿಕಾಸನ ಜೇಬಿಗೆ ಐವತ್ತು ಗಿಡಿದು ಹೊರ ನಡೆದ. ಕವರ್ ಒಳಗಿದ್ದಿದ್ದು ಹಣವೇ. ಸಾಹೇಬನ ಪಾಲು. ವಿಕಾಸನ ತಲೆತಿರುಗತೊಡಗಿ ವಿಚಾರಗಳ ತಾಕಲಾಟಕ್ಕೆ ಶುರುಹಚ್ಚಿಕೊಂಡಿತು.
ಇದು ಪ್ರತಿದಿನ ಸಲೀಸಾಗಿ ನಡೆಯತೊಡಗಿತು. ಸಾಹೇಬಗೆ ಬರಬೇಕಾದ್ದರ ಜೊತೆಗೆ ಇವನ ಪಾಲು ಇವನಿಗೆ ಆಯಾಸವಿಲ್ಲದೇ ದೊರಕುತ್ತಿತ್ತು. ಪುರುಸೊತ್ತಾದಾಗಲೆಲ್ಲ ತನ್ನ ಬಳಿ ಎಷ್ಟು ದುಡ್ಡಿದೆ? ಎಷ್ಟು ಖಚರ್ಾಯ್ತು? ತೂ.. ಅಷ್ಟೇಕೆ ಖಚರ್ು ಮಾಡಿದೆ? ಇವತ್ತು ಯಾರು? ಎಷ್ಟು? ಎಂಬ ಆಲೋಚನೆಯಲ್ಲಿಯೇ ಮುಳುಗಿದನು. ಅವರಾಗಿಯೇ ಕೊಟ್ಟಾಗ ತೆಗೆದುಕೊಂಡು ಸುಮ್ಮನಾಗುತ್ತಿದ್ದವನು ದಿನ ಕಳೆದಂತೆ ಕಛೇರಿಗೆ ಬರುವ ಪರಿಚಿತ -ಅಪರಿಚಿತರೆಲ್ಲರನ್ನು ತಾನಾಗಿಯೇ ಮಾತಾಡಿಸಿ ಅವರ ಸಮಸ್ಯೆ ತಿಳಿದು ಕೆಲ್ಸ ಮಾಡ್ಸಿಕೊಡ್ತಿನಿ, ನನ್ ಕಡೆನೂ ನೋಡ್ಕೊಬೇಕು ಎಂದು ಸೂಚನೆ ನೀಡುತ್ತಾ ಕೈಚಾಚತೊಡಗಿದನು. ಪ್ರತಿದಿನ ಏನಿಲ್ಲವೆಂದರೂ 250 - 300 ರೂಪಾಯಿಗಳು ಅವನದಾಗುತ್ತಿತ್ತು.
ಇತ್ತ ಆದಾಯ ಕಂಡರೂ ಅವನಲ್ಲಿಯ ಜಿಪುಣ ಜಾಗೃತನಾಗತೊಡಗಿದನು. ಆದರೆ ಮೊದಲಿನಿಂದಲೂ ಅವನೆನು ಅಂತ ಜಿಪುಣನಾಗಿರಲಿಲ್ಲ. ಇತ್ತೀಚೆಗೆ ಹತ್ತು ರೂಪಾಯಿ ಖಚರ್ು ಮಾಡಲು ಅವನು ಹತ್ತು ಸಲವೇ ಯೋಚಿಸುತ್ತಿದ್ದ. ಅವನ ಬುದ್ದಿಯೆಲ್ಲಾ ದುಡ್ಡನ್ನು ಕಲೆಹಾಕಿ ದೊಡ್ಡ ಮೊತ್ತ ಮಾಡುವುದನ್ನಷ್ಟೇ ಯೋಚಿಸುತ್ತಿತ್ತು. ತಿಂಗಳ ಸಂಬಳವೇ ಬೇಡವೆನಿಸುವಷ್ಟು ಹಣ ಅವನಲ್ಲಿ   ಶೇಖರಣೆಯಾಗಿತ್ತು. ಜೊತೆಗೆ 2 ತಿಂಗಳ ಸಂಬಳದ ಹಣವೂ ಸೇರಿ ಎರಡು ತಿಂಗಳಲ್ಲೇ ಹತ್ತಾರು ಸಾವಿರಗಳು ಅವನಲ್ಲಿ ಸೇರಿತ್ತು. ಚಪ್ಪಲಿ ಹರಿದರೂ ಹೊಲಿಗೆ ಹಾಕಿಸಿ ನಡೆದನೇ ಹೊರತು ಹೊಸದನ್ನು ಕೊಳ್ಳುವ ಧೈರ್ಯ ಮಾಡಲಿಲ್ಲ.
ಆದರೇ ಅವನ ಗುರಿಯ ಕನಸು ಮಾತ್ರ ಆಗಾಗ ಬಿಚ್ಚಿಕೊಂಡು ಆಲೋಚನೆಗಳಲ್ಲಿ ರೂಪ ತಾಳುತ್ತಿತ್ತು. ದಿನನಿತ್ಯದಲ್ಲಿ ಕಂಡಂತಹ ಕೆಲವು ಭಾವುಕ ಸನ್ನಿವೇಶಗಳು, ಸಮುದ್ರ ದಡದ ಪ್ರೇಮಿಗಳು, ಸುಕ್ಕುಹಿಡಿದ ಅಜ್ಜಿಯ ನಗು, ಮಂಗಳೂರಿನ ಸುಂದರ ಸೂಯರ್ಾಸ್ತಗಳು ಚಿತ್ರಿಸುವಂತೆ ಆಗಾಗ್ಗೆ ಕೈಬೀಸುತ್ತಿದ್ದವು. ಸದ್ಯದಲ್ಲೆ ಇವನೆಲ್ಲಾ ಪಟದೊಳಕ್ಕೆ ಕಟ್ಟಿಕೂರಿಸಬೇಕು ಅಂದುಕೊಳ್ಳುತ್ತಿದ್ದನು. ಮತ್ತೊಂದು ಕಡೆ ಖಾಲಿ ಹಾಳೆ ಸಿಕ್ಕಿದ ಕಡೆಯೆಲ್ಲಾ ಲೆಕ್ಕಮಾಡುತ್ತಾ ಕೂರತೊಡಗಿದ. ಜೇಬಿನಲ್ಲೆಷ್ಟು, ಬ್ಯಾಂಕಿನಲ್ಲೆಷ್ಟು, ಮುಂದಿನ ವಾರದೊಳಗೆ ಎಷ್ಟಾಗಬಹುದು ಇವುಗಳೇ ಆ ಲೆಕ್ಕಾಚಾರಗಳಾಗಿದ್ದವು. ವಿಕಾಸ್ ದಿನ ದಿನಕ್ಕೆ ವಿ-ಕಾಸುವೇ ಆಗಿ ಹೋದನು.
ಅದೊಂದು ದಿನ, ತಿಂಡಿ ತಿನ್ನದೇ ಅರ್ಧ ಟೀ ಕುಡಿದು ನಗರದ ಬೀದಿಗಳಲ್ಲಿ ಜೇಬಿಗೆ ಕೈಹಾಕಿ ನಡೆಯುತ್ತಿರುವಾಗ ಚಿತ್ರಕಲಾ ಸಾಮಾಗ್ರಿಗಳು ದೊರೆಯುತ್ತವೆ, ಎಂಬ ಮಾಹಿತಿಯಿದ್ದ ಜಾಹೀರಾತುವೊಂದನ್ನು ಕಂಡು ಆ ಅಂಗಡಿ ಬಳಿ ಹೋದನು. ತರತರಹದ ಪೆನ್ಸೀಲುಗಳು, ಬ್ರಶ್, ಬಣ್ಣದ ಡಬ್ಬಿಗಳು, ತೆಳು-ಗಟ್ಟಿ ಹಾಳೆಗಳನ್ನು ಕೇಳಿ ತೆಗೆಸಿದ. ಕಣ್ಣಮುಂದೆ ಎಲ್ಲಾ ಸಾಮಾಗ್ರಿಗಳನ್ನು ಒಟ್ಟಾಗಿ ಕಂಡು ಅವನು ಮನಸ್ಸು ಉಲ್ಲಾಸಗೊಂಡಿತು. ಅವುಗಳ ಬೆಲೆಯನ್ನು ಕೇಳಿ ಲೆಕ್ಕಮಾಡಹೊರಟನು. ಮನಸ್ಸೆಲ್ಲೋ ಒಂದು ಕಡೆ ಮುಷ್ಕರ ಸಾರಿ ಕೆಳಮುಖನಾಗಿ ಜಗ್ಗತೊಡಗಿತು. ಇಬ್ಬದಿಗೆ ಸಿಲುಕಿದವನು ಒಂದು ಕ್ಷಣ ಯೋಚಿಸಿ ಗಂಟಲು ಸರಿಮಾಡಿಕೊಂಡು ಬೇಡ ಸಾರ್, ಸಾರಿ ಎಂದು ಮುಂದೆ ಅಡಿಯಿಟ್ಟನು.

No comments:

Post a Comment

Thanku